ಕಾಪು : ತಾಲೂಕಿನಾದ್ಯಂತ ನಾಗರಪಂಚಮಿಯನ್ನು ಇಂದು ಆಚರಿಸಲಾಯಿತು. ಎಲ್ಲೆಲ್ಲೂ ನಾಗಸನ್ನಿಧಿಯಲ್ಲಿ ಭಕ್ತ ವರ್ಗ ನಾಗದೇವರಿಗೆ ವರ್ಷಂಪ್ರತಿಯ ಸೇವೆಯನ್ನು ನೀಡಿದರು.
ಕರಾವಳಿಯಲ್ಲಿ ನಾಗಾರಾಧನೆಗೆ ತನ್ನದೇ ಆದ ಮಹತ್ವವಿದೆ. ತುಳುನಾಡ ಜನರ ಪಾಲಿನ ಮೊದಲ ಹಬ್ಬ ನಾಗರ ಪಂಚಮಿ. ಮೂಲಸ್ಥಾನಗಳಲ್ಲಿ ನಾಗದೇವರಿಗೆ ನಾಗರಪಂಚಮಿಯಂದು ತನು ತಂಬಿಲ ಸೇವೆ ಭಕ್ತರು ನೀಡುತ್ತಾರೆ.