ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸಮಾರಿಗುಡಿ ದೇವಳದ ಕರಸೇವೆಯಲ್ಲಿ ಇನ್ನಂಜೆ ಗ್ರಾಮಸ್ಥರು

Posted On: 22-08-2023 11:33AM

ಕಾಪು : ಪ್ರಥಮ ಹಂತದಲ್ಲಿ ಸುಮಾರು 30ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಈಗಾಗಲೇ ಕರಸೇವೆಯನ್ನು ಮಾಡಿರುವ ಇನ್ನಂಜೆ ಗ್ರಾಮಸ್ಥರು ದೇವಳದ ಪ್ರದಕ್ಷಿಣಾ ಪಥದ ಸುತ್ತಲೂ ಸ್ವಚ್ಛತೆಯನ್ನು ಮಾಡುವ ಮೂಲಕ ಕರಸೇವೆಯನ್ನು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ ಮಜಲು, ಶ್ರೀದೇವಿ ಭಜನಾ ಮಂಡಳಿಯ ಅಧ್ಯಕ್ಷರಾದ ಕೆ. ಲಕ್ಷ್ಮಣ ಶೆಟ್ಟಿ ಮಂಡೇಡಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಮಲತಾ ಮತ್ತು ಯುವಸೇನೆ ಮಡುಂಬು ತಂಡದ ಅಧ್ಯಕ್ಷರಾದ ಸುನಿಲ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.