ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ವತಿಯಿಂದ ಆಗಸ್ಟ್ 25, ಶುಕ್ರವಾರ
ಗಾಂಧಿನಗರ ಕಲಾವೃಂದದ ವೇದಿಕೆಯಲ್ಲಿ
10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಲಿದೆ.
ಈ ನಿಮಿತ್ತ ಬೆಳಗ್ಗೆ ಗಂಟೆ 9 ಕ್ಕೆ ಸಾಮೂಹಿಕ ಪ್ರಾರ್ಥನೆ, ಗಂಟೆ 9.30ಕ್ಕೆ ಕಲಶ ಪ್ರತಿಷ್ಠೆ, ಗಂಟೆ 10ಕ್ಕೆ ಚೂಡಿ ಪೂಜೆ, ಗಂಟೆ 10.15ಕ್ಕೆ ಕುಂಕುಮಾರ್ಚನೆ, ಗಂಟೆ 11.45ಕ್ಕೆ ಭಜನಾ ಕಾರ್ಯಕ್ರಮ, ಗಂಟೆ 12.30ಕ್ಕೆ ಮಂಗಳಾರತಿ ಮಹಾಪೂಜೆ, ಗಂಟೆ 1ಕ್ಕೆ ಅನ್ನಸಂತರ್ಪಣೆ ಜರಗಲಿದೆ ಎಂದು ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.