ಪಡುಬಿದ್ರಿ : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ಮಹಾಸಭೆಯಲ್ಲಿ, ಉಡುಪಿ ಜಿಲ್ಲೆಯಲ್ಲಿಯೇ 13 ವರ್ಷಗಳಿಂದ ಸತತವಾಗಿ 25% ಡಿವಿಡೆಂಡ್ ನೀಡುತ್ತಿರುವ ಏಕೈಕ ಸಂಸ್ಥೆಯಾಗಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.)ಗೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಗಳಿಸಿದ ಪ್ರಗತಿಯನ್ನು ಗುರುತಿಸಿ 2022-23ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಮಂಗಳೂರು ಕೊಡಿಯಾಲ್ ಬೈಲ್ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ (ಪ್ರಭಾರ) ದೀಪಕ್ಸಾಲ್ಯಾನ್ ರವರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಉಭಯ ಜಿಲ್ಲೆಗಳ ಸಹಕಾರಿಸಂಘಗಳ ಉಪನಿಬಂಧಕ ರಮೇಶ್ ಎಚ್. ಎನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷರಾದ ಜಯಕರಶೆಟ್ಟಿ ಇಂದ್ರಾಳಿ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ನಿರ್ದೇಶಕರುಗಳಾದ ಗಿರೀಶ್ ಪಲಿಮಾರು, ಶಿವರಾಮ ಎನ್ ಶೆಟ್ಟಿ, ವಾಸುದೇವ, ಮಾಧವಆಚಾರ್ಯ, ಯಶವಂತ, ಸುಚರಿತ ಉಪಸ್ಥಿತರಿದ್ದರು.