ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಳ ; ಸಾರ್ವಜನಿಕರಲ್ಲಿ ಆತಂಕ

Posted On: 26-08-2023 11:18AM

ಕಾಪು : ಇಲ್ಲಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳ್ಳಾರಿಯ ಹೊಸಪೇಟೆಯಿಂದ ಮಂಗಳೂರಿನ ಎಂಆರ್ಪಿಎಲ್ ಸಂಸ್ಥೆಗೆ ಸಾಗಿಸುತ್ತಿದ್ದ ನೈಟ್ರೋಜನ್ ಅನಿಲ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಾದ ಪರಿಣಾಮ ಅದರ ಚಾಲಕರು ನೈಟ್ರೋಜನ್ ಬಿಡುಗಡೆಗೊಳಿಸಿದ ಘಟನೆ ಶನಿವಾರ ಬೆಳಗ್ಗೆ ಘಟಿಸಿದೆ.

ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಿತರಾಗಿದ್ದು ಕಂಡು ಬಂದಿದೆ.

ಈ ಮಧ್ಯೆ ಪತ್ರಕರ್ತರು ಟ್ಯಾಂಕರ್ ಚಾಲಕರಲ್ಲಿ ವಿಚಾರಿಸಿದಾಗ ಜನರು ಆತಂಕ ಪಡುವ ವಿಷಯ ಏನಿಲ್ಲ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ನೈಟ್ರೋಜನ್ ನ ಒತ್ತಡ ಹೆಚ್ಚಾದ ಪರಿಣಾಮ ನಾವು ಅದನ್ನು ಸ್ವಲ್ಪ ಮಟ್ಟಿಗೆ ಬಿಡುಗಡೆಗೊಳಿಸುತ್ತಿದ್ದೇವೆ ಎಂದರು.