ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ‌ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ

Posted On: 26-08-2023 10:51PM

ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ವತಿಯಿಂದ ಶುಕ್ರವಾರ ಗಾಂಧಿನಗರ ಕಲಾವೃಂದದ ವೇದಿಕೆಯಲ್ಲಿ 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನಗೊಂಡಿತು.

ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರು ವರಮಹಾಲಕ್ಷ್ಮೀ ಪೂಜೆಯನ್ನು ನೆರವೇರಿಸಿದರು

ಈ ನಿಮಿತ್ತ ಸಾಮೂಹಿಕ ಪ್ರಾರ್ಥನೆ, ಕಲಶ ಪ್ರತಿಷ್ಠೆ, ಚೂಡಿ ಪೂಜೆ, ಕುಂಕುಮಾರ್ಚನೆ, ಭಜನಾ ಕಾರ್ಯಕ್ರಮ, ಮಂಗಳಾರತಿ ಮಹಾಪೂಜೆ ತದನಂತರ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭ ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.