ಕಾಪು : ಗುರ್ಮೆ ಫೌಂಡೇಶನ್ ಗುರ್ಮೆ, ಕಳತ್ತೂರು, ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಪೊಲಿಪು, ಮುಂಬೈ ಇವರ ಆಶ್ರಯದಲ್ಲಿ ಪೊಲಿಪು ಮೊಗವೀರ ಮಹಾಸಭಾ, ಪೊಲಿಪು, ಮುಂಬೈ ಪೊಲಿಪು ಹಳೆ ವಿದ್ಯಾರ್ಥಿ ಸಂಘ, ಪೊಲಿಪು, ಮುಂಬೈ, ಶ್ರೀ ಗಣೇಶೋತ್ಸವ ಸಮಿತಿ, ಪೊಲಿಪು ಇವರ ಸಹಭಾಗಿತ್ವದಲ್ಲಿ ಶ್ರೀನಿವಾಸ ವೈದ್ಯಕೀಯ ಕಾಲೇಜು ಮುಕ್ಕ, ಸುರತ್ಕಲ್, ಮಂಗಳೂರು ಇವರಿಂದ ಇಂದು ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸರ್ವೊತ್ತಮ್ ಕುಂದರ್, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜು ಉಪಾಧ್ಯಕ್ಷರಾದ ಡಾl ಎ. ಶ್ರೀನಿವಾಸ್ ರಾವ್, ಜಿಲ್ಲಾ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಮುಂಬೈ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸುರೇಂದ್ರ ಎಸ್, ಸುವರ್ಣ, ಪೊಲಿಪು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಧನಂಜಯ್ ಸಾಲ್ಯಾನ್, ಪೊಲಿಪು ಮೊಗವೀರ ಮಹಿಳಾ ಮಂಡಳಿ ಅಧ್ಯಕ್ಷರಾದ ಕವಿತಾ ಸುವರ್ಣ, ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಕಿರಣ್ ಆಳ್ವ, ಲತಾ ದೇವಾಡಿಗ, ಅನಿಲ್ ಕುಮಾರ್, ಡಾl ಶಶಿರಾಜ್ ಶೆಟ್ಟಿ, ಡಾl ಡಿ. ಬಿ ಮತ್ತಿತರರು ಉಪಸ್ಥಿತರಿದ್ದರು.