ಮಂಗಳೂರು : ಹಿರಿಯ ಸಂಶೋಧಕ ಬಾಬು ಶಿವಪೂಜಾರಿ ಪ್ರಧಾನ ಸಂಪಾದಕತ್ವದ 'ಬಿಲ್ಲವರ ಗುತ್ತು ಬರ್ಕೆಗಳು' ಸಂಶೋಧನಾ ಗ್ರಂಥವನ್ನು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕುದ್ರೋಳಿ ಕ್ಷೇತ್ರದಲ್ಲಿ ಲೋಕಾರ್ಪಣೆಗೊಳಿಸಿದರು.
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶ್ರೀ ವಿಖ್ಯಾತನಂದ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್, ಊರ್ಮಿಳಾ ರಮೇಶ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಚಿತ್ತರಂಜನ್ ಬೋಳಾರ್, ಗಣೇಶ್ ಅಮೀನ್ ಸಂಕಮಾರ್, ಸಾಹಿತಿ ಬಿ.ಎಂ.ರೋಹಿಣಿ, ಪಿತಾಂಬರ ಹೆರಾಜೆ, ಕಟಪಾಡಿ ಶಂಕರ ಪೂಜಾರಿ, ನವೀನ್ಚಂದ್ರ ಸುವರ್ಣ, ವೇದಕುಮಾರ್, ಹರೀಶ್ ಪೂಜಾರಿ, ಸುನೀಲ್ ಪೂಜಾರಿ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ ಮತ್ತಿತರರು ಉಪಸ್ಥಿತರಿದ್ದರು.