ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯುವಕ ಮಂಡಲ ಪೆರಂಪಳ್ಳಿ : 15ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ

Posted On: 02-09-2023 11:01PM

ಉಡುಪಿ : ನಗರಸಭಾ ವ್ಯಾಪ್ತಿಯ ಪೆರಂಪಳ್ಳಿಯ ಸಾಮಾಜಿಕ ಸಂಸ್ಥೆಯಾಗಿರುವ ಯುವಕ ಮಂಡಲ ಪೆರಂಪಳ್ಳಿ ಇದರ ಆಶ್ರಯದಲ್ಲಿ 15ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆಯು ಸಪ್ಟೆಂಬರ್ 3, ಆದಿತ್ಯವಾರ ಮಧ್ಯಾಹ್ನ 3:30ಕ್ಕೆ ದಿ. ಮಂಜುನಾಥ ಶಿವತ್ತಾಯ ರಂಗಮಂದಿರ ಪೆರಂಪಳ್ಳಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಭಾಗ ಒಂದರಲ್ಲಿ ಮೂರು ವರ್ಷದವರೆಗಿನ ಚಿಣ್ಣಾರಿಗಾಗಿ ಮೂರು ನಿಮಿಷ ಮತ್ತು ಮೂರು ವರ್ಷಕ್ಕೆ ಮೇಲ್ಪಟ್ಟು 6 ವರ್ಷದವರೆಗಿನ ಪುಟಾಣಿಗಳಿಗಾಗಿ ಮೂರು ನಿಮಿಷದ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ. ಎರಡು ವಿಭಾಗಗಳಲ್ಲಿ ನಗದು ಬಹುಮಾನವಿದ್ದು, ಆಸಕ್ತ ಮಕ್ಕಳು ಹೆಸರು ನೋಂದಾಯಿಸಲು ಅವಕಾಶವಿದೆಯೆಂದು ಸಂಘಟಕರು ತಿಳಿಸಿದ್ದಾರೆ.