ಸೋಮವಾರದಿಂದ ಉಡುಪಿ ಜಿಲ್ಲೆಯ ಹೆಜಮಾಡಿ ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳು ಉಕ್ಕೇರಿ ಜನವಸತಿಯತ್ತ ಹರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಚರ್ಚೆಗೂ ಕಾರಣವಾಗಿತ್ತು. ಇದರಿಂದ ದೂರದ ಊರಿನಲ್ಲಿದ್ದ ಅಲ್ಲಿನ ನಿವಾಸಿಗಳು ಭಯಭೀತರಾಗಿದ್ದರು. ಆದರೆ ಇದು ಎಲ್ಲಿಯೋ ನಡೆದ ಘಟನೆಯನ್ನು ಹೆಜಮಾಡಿಯಲ್ಲಿ ಎಂದು ಬಿಂಬಿಸಲಾಗಿದ್ದು. ಇಂತಹ ಘಟನೆ ನಡೆದೇ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂತಹ ವಿಡಿಯೋ ಹರಿಬಿಡುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.