ಗಣೇಶ ಚತುರ್ಥಿ : ಉಡುಪಿ, ದ.ಕ ಜಿಲ್ಲೆಯಲ್ಲಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ
Posted On:
16-09-2023 04:25PM
ಗಣೇಶ ಚತುರ್ಥಿ : ಉಡುಪಿ, ದ.ಕ ಜಿಲ್ಲೆಯಲ್ಲಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ
ಮೊದಲು ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಾಗಿತ್ತು. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ.
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆಪ್ಟೆಂಬರ್ 19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.