ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾರ್ಕಳ : ನಾನಿಲ್ತಾರು ಕುಲಾಲ ಸಂಘದ 35ನೇ ವರ್ಷದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 18-09-2023 04:45PM

ಕಾರ್ಕಳ : ಇಲ್ಲಿಯ ಕುಲಾಲ ಸಂಘ ನಾನಿಲ್ತಾರು ಮುಲ್ಲಡ್ಕ ಮುಂಡ್ಕೂರು ಇದರ ಅಕ್ಟೋಬರ್ 1, ಆದಿತ್ಯವಾರದಂದು ನಡೆಯುವ 35ನೇ ವರ್ಷದ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ಧ್ವನಿವರ್ಧಕ ಕೊಡುಗೆ, ಅಭಿನಂದನಾ ಕಾರ್ಯಕ್ರಮ, ವೈದ್ಯಕೀಯ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಬಿಡುಗಡೆ ಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ದಿನೇಶ್ ಕುಲಾಲ್, ಮಾಜಿ ತಾ.ಪ.ಉಪಾಧ್ಯಕ್ಷರು ಗೋಪಾಲ್ ಮೂಲ್ಯ, ಆಶಾ ವರದರಾಜ್, ಹರ್ಷಿತ, ಲೋಕೇಶ್, ಅನೀಶ್ ಉಪಸ್ಥಿತರಿದ್ದರು.