ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನಮ್ಮ ನಾಡ ಒಕ್ಕೂಟ - ಕಾಪು ತಾಲೂಕು ಘಟಕದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರರಿಗೆ ಸನ್ಮಾನ

Posted On: 18-09-2023 10:35PM

ಕಾಪು : ಮನುಕುಲದ ಸೇವೆಯೆ ಭಗವಂತನ ಸೇವೆ ಎಂಬ ಧ್ಯೇಯ ವಾಕ್ಯವನ್ನು ನಂಬಿಕೊಂಡು ಜಾತಿ ಮತ ಬೇದವಿಲ್ಲದೆ ಸಮಾಜ ಸೇವೆಯಲ್ಲಿ ಜನರಿಗೆ ತನ್ನ ಕೈಯಲ್ಲಿ ಆಗುವ ಸಹಾಯ ಮಾಡುತ್ತ ಉತ್ತಮ ಸಮಾಜ ಸೇವಕರಾಗಿ ಗುರುತಿಸಿ ಅನೇಕ ಸಂಘ ಸಂಸ್ಥೆಗಳಿಂದ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪಡೆದ ಫಾರೂಕ್ ಚಂದ್ರನಗರರನ್ನು ನಮ್ಮ ನಾಡ ಒಕ್ಕೂಟ (ರಿ.) ಕಾಪು ತಾಲೂಕು ಘಟಕದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭ ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಪಡುಬಿದ್ರಿ, ಉಪಾಧ್ಯಕ್ಷರಾದ ಮಹಮ್ಮದ್ ಇರ್ಫಾನ್ ಕಾಪು, ಕಾರ್ಯದರ್ಶಿ ಅಬ್ದುಲ್ ಹಮೀದ್ ಯೂಸುಫ್, ಕೋಶಾಧಿಕಾರಿ ಯು.ಎ ರಶೀದ್, ಸದಸ್ಯ ರಝಾಕ್ ಉಚ್ಚಿಲ ಉಪಸ್ಥಿತರಿದ್ದರು.