ಹೆಜಮಾಡಿ : ವಿಶ್ವ ಹಿಂದೂ ಪರಿಷತ್, ಹೆಜಮಾಡಿ ಇದರ 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಲುವಾಗಿ ಸೆಪ್ಟೆಂಬರ್ 19ರಂದು ಸಭಾ ಕಾರ್ಯಕ್ರಮ ಜರಗಿತು.
ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಹೆಜಮಾಡಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸುಧಾಕರ ಕರ್ಕೇರ, ರಾಷ್ಟ್ರಮಟ್ಟದ ತರಬೇತುದಾರರಾದ ರಾಜೇಂದ್ರ ಭಟ್ ಕೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದಯಾನಂದ ಹೆಜಮಾಡಿ, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಶ್ರೀಹರಿ ಭಟ್, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾಮನ್ ಕೋಟ್ಯಾನ್, ಹೆಜಮಾಡಿ ಘಟಕ ಭಜರಂಗದಳದ ಸಂಚಾಲಕರಾದ ನವೀನ್ ಕೋಟ್ಯಾನ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ ಉಪಸ್ಥಿತರಿದ್ದರು.