ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸೆಪ್ಟೆಂಬರ್ 25 : ಕಾಪು ಕುಲಾಲ ಯುವ ವೇದಿಕೆ, ಕುಲಾಲ ಸಂಘದಿಂದ ರಾಜೇಶ್ ಕುಲಾಲ್ ಕುಟುಂಬಕ್ಕೆ ಆರ್ಥಿಕ‌‌ ನೆರವು ಹಸ್ತಾಂತರ ಕಾರ್ಯಕ್ರಮ

Posted On: 23-09-2023 05:18PM

ಕಾಪು : ಗ್ಯಾಂಗ್ರಿನ್ ಕಾಯಿಲೆಯಿಂದ ತನ್ನ ಒಂದು ಕಾಲು ಕಳೆದು, ಇನ್ನೊಂದು ಕಾಲು ಉಳಿಸಲು ಪ್ರಯತ್ನ ಮಾಡುತ್ತಲಿರುವ ಕಾಪು ಅದಮಾರು ನಿವಾಸಿ ರಾಜೇಶ್ ಕುಲಾಲ್ ಕುಟುಂಬಕ್ಕೆ ಕಾಪು ಕುಲಾಲ ಯುವ ವೇದಿಕೆ ಹಾಗೂ ಕುಲಾಲ ಸಂಘ (ರಿ.) ಕಾಪು ವಲಯದ ವತಿಯಿಂದ ಸಂಗ್ರಹ ಗೊಂಡ ಧನಸಹಾಯವನ್ನು 25, ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ದಾನಿಗಳು, ಹಿತೈಷಿಗಳ ಸಹಭಾಗಿತ್ವದಲ್ಲಿ ರಾಜೇಶ್ ಕುಲಾಲ್ ಕುಟುಂಬಕ್ಕೆ ಹಸ್ತಾಂತರ ಮಾಡಲಿದ್ದಾರೆ.

ಸ್ವಜಾತಿ ಮಿತ್ರರು, ಹಿತೈಷಿಗಳು ಅಂದು ನಮ್ಮೊಡನೆ ಭಾಗಿಯಾಗಿ ಎಂದು ಕಾಪು ಕುಲಾಲ ಯುವ ವೇದಿಕೆ ಪ್ರಮುಖರು ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ ಪ್ರಕಟಣೆಯಲ್ಲಿ ತಿಳಿಸಿರುವರು.