ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದಿಂದ ಕುತ್ಯಾರು ಆನೆಗುಂದಿ ಗೋಶಾಲೆಗೆ ಹಿಂಡಿ, ಹಸಿ ಹುಲ್ಲು ಸಮರ್ಪಣೆ
Posted On:
10-10-2023 04:32PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಗೆ ಹಿಂಡಿ ಮತ್ತು ಹಸಿ ಹುಲ್ಲನ್ನು ಸಮರ್ಪಿಸಲಾಯಿತು.
ಈ ಸಂದರ್ಭ ಆಶೀರ್ವಚನ ನೀಡಿದ ಆನೆಗುಂದಿ ಮಠದ ಶ್ರೀಗಳು ಬದುಕಿನಲ್ಲಿ ಗೋಮಾತೆಯ ಸೇವೆ ಪ್ರತಿ ವರ್ಷ ಮಾಡುವ ನಿಮ್ಮ ಸಂಸ್ಥೆಗೆ ಗೋಮಾತೆಯ ಆಶೀರ್ವಾದದೊಂದಿಗೆ 33 ಕೋಟಿ ದೇವತೆಗಳ ಆಶೀರ್ವಾದ ಇರಲಿ ಎಂದು ಆಶೀರ್ವದಿಸಿದರು.
ಗೋಮಾತೆಗಾಗಿ ದಾನ ನೀಡಿದ ಎಲ್ಲರಿಗೂ ಅಧ್ಯಕ್ಷರಾದ ಉಮೇಶ ಆಚಾರ್ಯರು ಪ್ರತಿ ವರ್ಷ ಗೋಮಾತೆಯ ಸೇವೆ ಮಾಡುವ ಭಾಗ್ಯ ನಮಗೆ ದೇವರು ಕರುಣಿಸಲಿ ಎಂದು ದಾನಿಗಳಿಗೆ ಕೃತಜ್ಞತೆ ಅರ್ಪಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ವಂದಿಸಿದರು.