ಕಾಪು : ಬಸ್ ನಿಲ್ದಾಣ ಬಳಿ ಬಿದ್ದುಕೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಆಸೀಫ್ ಆಪತ್ಭಾಂದವ ಮತ್ತು ತಂಡ
Posted On:
11-10-2023 06:45PM
ಕಾಪು : ಕಳೆದ ಎರಡು ದಿನದಿಂದ ಹೊಸ ಮಾರಿಗುಡಿ ಬಳಿಯ ಬಸ್ ನಿಲ್ದಾಣದ ಹತ್ತಿರ ಅನಾಥವಾಗಿ ಬಿದ್ದುಕೊಂಡಿದ್ದ ವ್ಯಕ್ತಿಯೋರ್ವರನ್ನು ಮೈಮುನಾ ಫೌಂಡೇಶನ್ (ರಿ.) ಇದರ ಆಸೀಫ್ ಆಪತ್ಭಾಂದವ ಮತ್ತು ತಂಡ ಅವರನ್ನು ಸ್ನಾನ ಮಾಡಿಸಿ, ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿದರು.
ವ್ಯಕ್ತಿಯು ಶಂಕರಪುರ ನಿವಾಸಿ ಶಿವಪ್ಪ ಕುಲಾಲ್ ಎಂದು ಹೇಳಿಕೊಳ್ಳುತ್ತಿದ್ದಾರೆ.
ಈ ಸಂದರ್ಭದಲ್ಲಿ ಯೋಗೀಶ್ ಕೈಪುಂಜಾಲು ಉಪಸ್ಥಿತರಿದ್ದರು.