ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ - ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ಸಂಪನ್ನ

Posted On: 17-10-2023 11:32AM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಹೊಸ ಮಾರಿಗುಡಿ ಜೀರ್ಣೋದ್ದಾರದ ಕಾಪು ವಿಧಾನಸಭಾ ಕ್ಷೇತ್ರ ಗ್ರಾಮ ಸಮಿತಿ ಮತ್ತು ವಿವಿಧ ಸಮಿತಿಯ ಮಹಿಳೆಯರಿಂದ ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ನಡೆಯಿತು.

ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿಯವರ ಮಾರ್ಗದರ್ಶನ ದಲ್ಲಿ ಅರ್ಚಕ ವೆl ಮೂ। ಶ್ರೀನಿವಾಸ ತಂತ್ರಿಯವರ ಪ್ರಾರ್ಥನೆಯೊಂದಿಗೆ ಭಜನೆ, ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಕುಂಕುಮಾರ್ಚನೆ ಸೇವೆಯ ಉಸ್ತುವಾರಿ ಗಳಾದ ಶಿಲ್ಪಾ ಜಿ. ಸುವರ್ಣ, ಶಾಂತಲತಾ ಎಸ್. ಶೆಟ್ಟಿ, ಬೀನಾ ವಿ. ಶೆಟ್ಟಿ, ಅನುರಾಧಾ ಎಂ. ಶೆಟ್ಟಿ, ರೇಣುಕಾ ಧನಂಜಯ್, ಶೈಲಜಾ ಪುರುಷೋತ್ತಮ್, ಕವಿತಾ ಶೆಟ್ಟಿ, ಪ್ರತಿಭಾ ಯು. ಶೆಟ್ಟಿ, ಸುನೀತಾ ಶೆಟ್ಟಿ, ಅರ್ಚನಾ ಶೆಟ್ಟಿ, ಸಾವಿತ್ರಿ ಗಣೇಶ್‌, ವಿಜಯಲಕ್ಷ್ಮಿ ಆಚಾರ್ಯ, ಮಮತಾ ವೈ. ಶೆಟ್ಟಿ, ಹೀರಾ ಡಿ. ಶೆಟ್ಟಿ, ಜಯಲಕ್ಷ್ಮಿ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಸಮಿತಿ ಉಪಾಧ್ಯಕ್ಷರಾದ ಗಂಗಾಧರ ಬಿ. ಸುವರ್ಣ, ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಎಸ್. ಶೆಟ್ಟಿ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು.