ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬಯಿ ವತಿಯಿಂದ ಕಾರ್ನಾಡು ಅಮೃತಾಮಯಿ ನಗರ ನಿವಾಸಿ ಗೀತಾ ಅವರ ಮನೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಯಿತು.
ಕುಟುಂಬಕ್ಕೆ ದೀಪಾವಳಿ ಹಬ್ಬದ ಸಲುವಾಗಿ ಮಕ್ಕಳಿಗೆ ಹೊಸ ಬಟ್ಟೆ ಹಾಗೂ ದಿನಸಿ ಸಾಮಾನುಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ಗೌರವ ಸಲಹೆಗಾರರಾದ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಸದಸ್ಯರಾದ ರವಿ ಶೆಟ್ಟಿ ಶಾರದೆ, ಜಗನ್ನಾಥ್ ಶೆಟ್ಟಿ ರಮಣಿ ಐಸ್ ಕ್ರೀಮ್ ಪಡುಬಿದ್ರಿ, ಸುಧಾಕರ್ ಕೆ ಪಡುಬಿದ್ರಿ, ಧೀರಜ್ ಮತ್ತಿತರರು ಉಪಸ್ಥಿತರಿದ್ದರು.