ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುಂಜೂರು ದುರ್ಗಾ ದೇವಸ್ಥಾನದ ನಿವೃತ್ತ ಸಿಬಂದಿಗಳಿಗೆ ಸಮ್ಮಾನ

Posted On: 07-08-2020 08:37PM

ಕಾಪು, ಆ. 7 : ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಹಲವು ದಶಕಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಗೋವಿಂದ ಉಡುಪ ದಂಪತಿ ಮತ್ತು ಅಡಿಪುಮನೆ ಗೋವಿಂದ ದೇವಾಡಿಗ ದಂಪತಿಯನ್ನು ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ತಲಾ 50,000 ರೂಪಾಯಿ ಗೌರವ ನಿಧಿಯೊಂದಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಸಮ್ಮಾನ ಕಾರ್ಯಕ್ರಮ ನೆರವೇರಿಸಿದ ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಮಾತನಾಡಿ, ಇಬ್ಬರೂ ಕೂಡಾ ತಮ್ಮ ಸೇವೆಯ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಭವಿಷ್ಯದಲ್ಲಿ ಇವರ ಜೀವನವನ್ನು ದೇವರು ಸುಖಮಯವಾಗಿರಿಸಲಿ ಎಂದು ಹಾರೈಸಿದರು.

ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಮನೆ ದೇವರಾಜ ರಾವ್ ಅಧ್ಯಕ್ಷತೆ ವಹಿಸಿದ್ದರು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ, ಎಲ್ಲೂರುಗುತ್ತು ಪ್ರಭಾಕರ ಶೆಟ್ಟಿ, ದೇಗುಲದ ಪರ್ಯಾಯ ಅರ್ಚಕ ವೇ. ಮೂ. ಚಕ್ರಪಾಣಿ ಉಡುಪ, ಅರ್ಚಕ ವೇ.ಮೂ. ಹರಿಕೃಷ್ಣ ಉಡುಪ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ ರಾವ್, ಲೋಕೇಶ್ ಶೆಟ್ಟಿ ಬೆಳಪುಗುತ್ತು, ಗಿರಿಜಾ ಪೂಜಾರ್ತಿ, ಸರೋಜಿನಿ ಕುಮಾರಿ, ಪ್ರಬಂಧಕ ರಾಘವೇಂದ್ರ ಶೆಟ್ಟಿ, ಮಾಧವ ರಾವ್ ಪಣಿಯೂರು, ಎಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಮತಾ ವೈ. ಶೆಟ್ಟಿ, ಯಶೋಧರ ಶೆಟ್ಟಿ ಬಗ್ಗೇಡಿಗುತ್ತು, ಶ್ರೀ ದುರ್ಗಾ ಮಿತ್ರವೃಂದದ ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರು ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೂರು ಗ್ರಾ.ಪಂ. ಮಾಜಿ ಸದಸ್ಯ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.