ನಾಗರಿಕ ಸೇವಾ ಸಮಿತಿ (ರಿ) ಬಂಟಕಲ್ಲು ಹಾಗೂ ಕಾರು ಚಾಲಕರ ಮತ್ತು ಮಾಲಕರ ಸಂಘ ಬಂಟಕಲ್ಲು ಇವರ ಜಂಟಿ ಆಶ್ರಯದಲ್ಲಿ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ಬಂಟಕಲ್ಲು ಪೇಟೆಯಲ್ಲಿ ನಡೆಯಿತು. ಬಂಟಕಲ್ಲು ಕಾರು ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾದ ಶ್ರಿ ಮಾದವ ಕಾಮತ್ ರವರು ಧ್ವಜಾರೋಹಣಗೈದು ಮತ್ತು ಶುಭಾಶಯ ಕೋರಿದರು.
ಈ ಸಂಧರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಬಂಟಕಲ್ಲು ಪರಿಸರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಶ್ರಿ ಕೆ.ಆರ್ ಪಾಟ್ಕರ್ ರವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಕಮಲ, ಸವಿತಾ, ವಿನೋದ ಆಚಾರ್ಯ, ಶ್ರೀಮತಿ ವಿಜಯ, ಶ್ರೀಮತಿ ಶಕುಂತಳ ಉಪಸ್ಥಿತರಿದ್ದರು. ಕಾರು ಚಾಲಕರ & ಮಾಲಕರ ಸಂಘದ ಅಧ್ಯಕ್ಷ ಉಮೇಶ್ ರಾವ್, ವಿನ್ಸಂಟ್ ಪಲ್ಕೆ, ನಾಗರಿಕ ಸಮಿತಿ ಕಾರ್ಯದರ್ಶಿ ದಿನೇಶ್ ದೇವಾಡಿಗ, ಬಂಟಕಲ್ಲು ಕಾರು ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ರಿಕ್ಷಾ ಚಾಲಕರ ಮಾಲಕರ ಸಂಘದ ಪದಾಧಿಕಾರಿಗಳು; ಸದಸ್ಯರು, ಬಂಟಕಲ್ಲು ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು.