ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ತಿಂಗಳು ಕಳೆದರು ಉಡುಪಿ ಜಿಲ್ಲಾ ದೈವಾರಾಧಕರ ಮನವಿಗೆ ಶಾಸಕರ ಪ್ರತಿಕ್ರಿಯೆಯಿಲ್ಲ

Posted On: 27-08-2020 02:43PM

ತುಳುನಾಡ ಧೈವಾರಾಧಕರ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ಇಂದು ಮಾಜಿ ಉಸ್ತುವಾರಿ ಸಚಿವರು ಹಾಗೂ ಮಾಜಿ ಶಾಸಕರಾದಂತಹ ಪ್ರಮೋದ್ ಮಧ್ವರಾಜ್ ಅವರಿಗೆ ಅವರ ನಿವಾಸದಲ್ಲಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಮನವಿಯನ್ನು ಕೊಡಲಾಯಿತು.

ಕೋರನ ತುರ್ತು ಸಂದರ್ಭದಲ್ಲಿ ಸರ್ಕಾರದಿಂದ ದೈವ ಚಾಕ್ರಿ ವರ್ಗದವರಿಗೆ ಯಾವುದೇ ವಿಶೇಷ ಪ್ಯಾಕೇಜನ್ನು ಬಿಡುಗಡೆ ಮಾಡಲಿಲ್ಲ. ಹಾಗೂ ತಕ್ಕಮಟ್ಟಿಗೆ ಕರಾವಳಿಯಲ್ಲಿ ನಡೆಯುವ 150 ಜನ ಸೀಮಿತಕ್ಕೆ ದೈವಾರಾಧನೆಗೆ ಸರ್ಕಾರದಿಂದ ಅನುಮತಿ ಬರಲಿಲ್ಲ. ಉಡುಪಿ ಜಿಲ್ಲಾಧಿಕಾರಿಯವರಿಗೆ ಹಾಗೂ ಎಷ್ಟೇ ರಾಜಕೀಯ ವ್ಯಕ್ತಿಗಳಿಗೆ ಮನವಿ ನೀಡಿದರೂ ಕೂಡ ಸ್ಪಂದನೆ ದೊರಕದಿರುವುದರಿಂದ ಪ್ರಮೋದ್ ಮದ್ವರಾಜ್ ಮುಖಾಂತರ ವಿರೋಧ ಪಕ್ಷದ ವತಿಯಿಂದ ದೈವಾರಾಧಕರ ಸಮಸ್ಯೆಗಳನ್ನು ಮನವರಿಕೆ ಮಾಡಿ ಎಂದು ಮನವಿಯಲ್ಲಿ ಒಕ್ಕೂಟದ ಪರವಾಗಿ ವಿನಂತಿಸಿಕೊಂಡಿದ್ದಾರೆ.

ಮನವಿಯನ್ನು ಪಡೆದುಕೊಂಡ ಮಾಜಿ ಶಾಸಕರು ಪ್ರಮೋದ್ ಮಧ್ವರಾಜ್ ದೈವಾರಾಧಕರ ಸಮಸ್ಯೆಯನ್ನು ಈ ದಿನ ಮುಖ್ಯಮಂತ್ರಿ ಹಾಗೂ ಇದಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಮಾತಾಡುತ್ತೇನೆ. ಯಾವುದೇ ಸಮಸ್ಯೆಗೆ ನಿಮ್ಮೊಂದಿಗೆ ಬೆಂಬಲವಾಗಿ ನಾನಿರುತ್ತೇನೆ ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ, ಕೋಶಧಿಕಾರಿ ಶ್ರೀಧರ್ ಪೂಜಾರಿ, ಉಪಾಧ್ಯಕ್ಷರಾದ ರವಿ ಶೆಟ್ಟಿ, ಯೋಗೀಶ್ ಪೂಜಾರಿ, ಕಾಪು ಘಟಕದ ಅಧ್ಯಕ್ಷರಾದ ಯಶೋಧರ್ ಶೆಟ್ಟಿ ಹಾಗೂ ದಯೆಶಾ ಕೊಟ್ಯಾನ್, ಸುನಿಲ್ ಕುಮಾರ್, ಸಂತೋಷ್ ದೇವಾಡಿಗ, ನಿತ್ಯಾನಂದ, ಸೂರ್ಯಕಾಂತ್ ದೇವಾಡಿಗ ಮತ್ತು ರಕ್ಷಿತ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.