ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅರಿವು ಸಾಲದ ಮೊತ್ತ ವಿಳಂಬ ಬಿಡುಗಡೆಗೆ ಒತ್ತಾಯಿಸಿ ಮನವಿ

Posted On: 05-09-2020 01:12PM

ಕರ್ನಾಟಕ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವು ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಅರಿವು ಸಾಲದ ಮೊತ್ತ ಜೂನ್ ತಿಂಗಳಲ್ಲಿ ಮಂಜೂರು ಆಗುತ್ತಿದ್ದು ಆದರೆ ಈ ಬಾರಿ ಬಹಳ ವಿಳಂಬವಾಗಿದ್ದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಬಹಳ ಕಷ್ಟಕರವಾಗುತ್ತಿದೆ ಎಂದು ಎಸ್ ಐ ಓ ಜಿಲ್ಲಾದ್ಯಕ್ಷ ನಾಸೀರ್ ಹೂಡೆ ತಿಳಿಸಿದ್ದಾರೆ.

ಇವರು ಇಂದು ಮುಖ್ಯಮಂತ್ರಿ ಮತ್ತು ರಾಜ್ಯ ಅಲ್ಪಸಂಖ್ಯಾತ ಇಲಾಖೆಯಗೆ ಮನವಿಯನ್ನು ಸಲ್ಲಿಸುತ್ತಾ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಲವು ಧರ್ಮಧ ವಿದ್ಯಾರ್ಥಿಗಳಿಗೆ ಇದುವರೆಗೂ ಯಾವುದೇ ರೀತಿಯ ಸಾಲದ ಮೊತ್ತವನ್ನು ಆಯಾ ಕಾಲೇಜುಗಳಿಗೆ ಲಭಿಸಲಿಲ್ಲ. ಮತ್ತು ಕೆ. ಎಂ. ಡಿ. ಸಿ ಯವರು ಜೂನ್ ತಿಂಗಳಿಂದ ಹಣ ಬಿಡುಗಡೆ ಆಗುತ್ತದೆ ಎಂಬ ಸುಳ್ಳು ಭರವಸೆಯನ್ನು ನೀಡುತ್ತಲೇ ಇದ್ದು. ಸಾಲದ ಮೊತ್ತವನ್ನೇ ನಂಬಿದ ವಿದ್ಯಾರ್ಥಿಗಳಿಗೆ ಇದೀಗ ದಿಕ್ಕಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸಂಬಂಧ ಪಟ್ಟವರು ಇದರ ಬಗ್ಗೆ ಪ್ರಶ್ನಿಸಿ ವಿದ್ಯಾಥಿಗಳ ಜೀವನಕ್ಕೆ ಆಸರೆಯಾಗಬೇಕಿದೆ. ಅದರ ಜೊತೆಯಲ್ಲೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವು ಲಭಿಸುತ್ತಿದ್ದು ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭಿಸದೆ ವಿಳಂಬವಾಗುತ್ತಿದೆ ಈ ಬಗ್ಗೆ ತಾವುಗಳು ಸಂಬಂಧಪಟ್ಟ ಇಲಾಖೆಯ ಜೊತೆ ಚರ್ಚಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಲಿ ಎಂದು ಮನವಿಯಲ್ಲಿ ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್ ಐ ಓ ಜಿಲ್ಲಾ ಕಾರ್ಯದರ್ಶಿ ಶಾರೂಕ್, ಸದಸ್ಯರಾದ ಅಫ್ವಾನ್, ವಸೀಮ್, ಸಲಾವುದ್ದೀನ್, ಅಯಾನ್ ಮತ್ತು ರಿಝಾನ್ ಉಪಸ್ಥಿತರಿದ್ದರು.