ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನಿತರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ

Posted On: 05-09-2020 03:13PM

ರೋಟರಿ ಕಲ್ಯಾಣಪುರ ಮತ್ತು ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರು ವಂದನೆ ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ ಹಾಗೂ ಅವರ ಪತ್ನಿ ಕೆ ರತ್ನ ಎಮ್ ಆರ್ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಅಧ್ಯಕ್ಷ ಡೆಸ್ಮನ್ಡ್ ವಾಜ್, ಕಾರ್ಯದರ್ಶಿ ಲಿಯೋ ಅಂದ್ರಾದೆ, ವಿಘ್ನೇಶ್ವರ ಪ್ರಿಂಟರ್ಸ್ ಮಾಲಕರಾದ ಎಮ್ ಮಹೇಶ್ ಕುಮಾರ್, ನಿವೃತ್ತ ತರಂಗ ಸಂಪಾದಕರಾದ ಚೆಲುವ ರಾಜ್ ಪೆರಂಪಳ್ಳಿ, ನಿವೃತ್ತ ಪೋಸ್ಟ್ ಮಾಸ್ಟರ್ ಶೇಖರ್ ಪೂಜಾರಿ ಕಲ್ಮಾಡಿ, ಪ್ರಮೋದ್ ಸುವರ್ಣ, ಮನೀಶ್ ಕೃಷ್ಣ, ಮಧು ಕಿರಣ್, ಮಧುಸ್ಮಿತಾ ಮೊದಲಾದವರು ಉಪಸ್ಥಿತರಿದ್ದರು.