ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರಿಂದ ರಸ್ತೆ ಸ್ವಚ್ಛತಾ ಕಾರ್ಯ

Posted On: 06-09-2020 03:01PM

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ದ ನೇತೃತ್ವದಲ್ಲಿ ಸತತ 3 ಭಾನುವಾರ ಭೂತಬೆಟ್ಟುನಿಂದ ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಕೊಪ್ಪದಿಂದ ನಡಿಬೆಟ್ಟು ತನಕ ರಸ್ತೆ ಸ್ವಚ್ಛತಾ ಕಾರ್ಯ ನಡೆಯಿತು.ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಶಿರ್ವ ವಲಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ,ಬಜರಂಗದಳ ವಲಯ ಸಂಯೋಜಕ ಪ್ರಕಾಶ್ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಅಭಿನಂದಿಸಿ ಶುಭಹಾರೈಸಿದರು.ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ ಕೊಪ್ಪ,ವಿಷ್ಣುಮೂರ್ತಿ ಘಟಕದ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಆನಂದ ಶೆಟ್ಟಿ,ಬಜರಂಗದಳ ಸಂಯೋಜಕ ರಾಕೇಶ್ ಶೆಟ್ಟಿ,ಸೇವಾ ಪ್ರಮುಖ್ ಅವಿನಾಶ್ ಶೆಟ್ಟಿ,ಗೋರಕ್ಷಾ ಪ್ರಮುಖ್ ಸುಕೇಶ್ ಶೆಟ್ಟಿ,ಮಾತೃಶಕ್ತಿ ಸಂಯೋಜಕಿ ಚಂದ್ರಾವತಿ,ದುರ್ಗಾವಾಹಿನಿ ಸಂಯೋಜಕಿ ಸುಮಲತಾ,ಘಟಕದ ಜವಾಬ್ದಾರಿಯುತರು ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.