ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹರಿದಾಸ ಬಿ. ಸಿ. ರಾವ್ ದಂಪತಿಗಳಿಗೆ ಕಲ್ಯಾಣಪುರ ರೋಟರಿ ವತಿಯಿಂದ ಸಮ್ಮಾನ

Posted On: 07-09-2020 01:16PM

ಉಡುಪಿ ಕಲ್ಯಾಣಪುರ ರೋಟರಿ ಕ್ಲಬ್ ಮತ್ತು ಶ್ರೀ ವಿಘ್ನೇಶ್ವರ ಪ್ರಿಂಟರ್ಸ್, ಮಲ್ಪೆ ಇವರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಡೆಸಲಾಯ್ತು. ಈ ಸಲುವಾಗಿ ಹೆಬ್ರಿ ಸಮೀಪದ ಶಿವಪುರದ ವಿಶ್ರಾಂತ ಶಿಕ್ಷಕ, ಹರಿದಾಸ ಬಿ. ಸಿ. ರಾವ್, ಶಿವಪುರ ದಂಪತಿಗಳನ್ನು ಅವರ ಶಿವಪುರದ ಪಾಂಡುಕಲ್ಲಿನ ಸ್ವಗೃಹ ‘ಗುರುಪದ’ ದಲ್ಲಿ ಯಥೋಚಿತ ಗೌರವಿಸಿ ಸಂಮಾನಿಸಲಾಯ್ತು. ರೋಟರಿ ಅಧ್ಯಕ್ಷ ಡೆಸ್ಮಂಡ್ ವಾಸ್ ಸ್ವಾಗತಿಸಿದರು, ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಮಾಲಕ, ರೋಟರಿ ಸದಸ್ಯ ಎಂ. ಮಹೇಶ್ ಕುಮಾರ್ ಮಲ್ಪೆ ಪ್ರಸ್ತಾವನೆಗೈದು, ಅಭಿನಂದನ ಪತ್ರ ವಾಚಿಸಿ, ಸನ್ಮಾನಿತರನ್ನು ಕುರಿತು ಮಾತನಾಡಿದರು. ಸಭೆಯಲ್ಲಿ ರೋಟರಿ ಕಾರ್ಯದರ್ಶಿ, ಲಿಯೋ ವಿಲಿಯಂ ಅಂದ್ರಾದೆ, ಶ್ರೀಮತಿ ಅಹಲ್ಯಾ ಸಿ. ರಾವ್ ಟಿಸಿಎಸ್ ಉದ್ಯೋಗಿ, ಬಿ. ಆದರ್ಶ ರಾವ್ ಉಪಸ್ಥಿತರಿದ್ದರು. ಸನ್ಮಾನಿತರು ಈ ಗೌರವ ಮುದ ನೀಡಿದೆ ಎಂದು ಹೇಳಿ ಕೃತಜ್ಞತೆ ಸೂಚಿಸಿದರು. ಚೆಲುವರಾಜ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು, ಶೇಖರ ಪೂಜಾರಿ ವಂದಿಸಿದರು.

ಬರಹ : ಬಿ.ಸಿ. ರಾವ್ ಶಿವಪುರ (ಹೆಬ್ರಿ) ಹವ್ಯಾಸಿ ಪತ್ರಕರ್ತರು