ಉಚ್ಚಿಲ ರೋಟರಿ ಕ್ಲಬ್ : ಡೆಂಗ್ಯು, ಮಲೇರಿಯಾ ಜಾಗೃತಿ ಕಾರ್ಯಕ್ರಮ ; ಕರಪತ್ರ ಹಂಚಿಕೆ
Posted On:
20-08-2024 05:44PM
ಉಚ್ಚಿಲ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಉಚ್ಚಿಲದ ಸರಸ್ವತಿ ಮಂದಿರ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಡೆಂಗ್ಯು ಮತ್ತು ಮಲೇರಿಯಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಕರಪತ್ರಗಳನ್ನು ಹಂಚಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಚ್ಚಿಲ ರೋಟರಿ ಅಧ್ಯಕ್ಷರಾದ ಇಬಾದುಲ್ಲ ರಫೀಕ್ ಅಹಮದ್ ವಹಿಸಿದ್ದರು.
ಈ ಸಂದರ್ಭ ರೋಟರಿ ಸಂಸ್ಥೆಯ ಸತೀಶ್ ಕುಂಡಂತಾಯ, ಅಚ್ಯುತ ಶೆಣೈ, ಚಂದ್ರಹಾಸ ಪೂಜಾರಿ, ನಜ್ಮ, ಮುಖ್ಯ ಶಿಕ್ಷಕ ಸದಾಶಿವ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.