ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಗಸ್ಟ್‌ 25 : ಪಡುಬಿದ್ರಿ ಬಂಟರ ಸಂಘದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ

Posted On: 21-08-2024 09:10PM

ಪಡುಬಿದ್ರಿ : ಇಲ್ಲಿನ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಯೋಜನೆಯಲ್ಲಿ ಆಗಸ್ಟ್ 25 ರಂದು ಪಡುಬಿದ್ರಿ ಬಂಟರ ಸಂಘ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮತ್ತು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರು ಡಾ. ದೇವಿಪ್ರಸಾದ್ ಶೆಟ್ಟಿಯವರು ಬುಧವಾರ ಪಡುಬಿದ್ರಿ ಬಂಟರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಂ. ಆರ್. ಜಿ. ಗ್ರೂಪ್‌ನ ಛೇರ್ಮನ್ ಡಾ. ಕೆ. ಪ್ರಕಾಶ್ ಶೆಟ್ಟಿಯವರು ನೆರವೇರಿಸಲಿದ್ದು, ಪಡುಬಿದ್ರಿ ಬಂಟರ ಸಂಘ ದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ಧಾರೆ. ಮುಖ್ಯ ಅತಿಥಿ ಗಳಾಗಿ ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ ನ ಅಧ್ಯಕ್ಷರು ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಪೂರ್ವ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ ಶೆಟ್ಟಿ, ಸಾಂತೂರ್ ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿಯವರು ಭಾಗವಹಿಸಲಿದ್ದಾರೆ‌.

ಉದ್ಘಾಟನಾ ಸಮಾರಂಭ ಮುಗಿದ ಬಳಿಕ ಡಾ. ಕೆ. ಪ್ರಕಾಶ್ ಶೆಟ್ಟಿಯವರು ಭಾಗವಹಿಸುವ ಅಭ್ಯರ್ಥಿಗಳಿಗೆ ಯಶಸ್ವಿ ಉದ್ಯಮಿಯಾಗಿ ಸಾಗಿ ಬಂದ ರೀತಿಯ ಬಗ್ಗೆ ಯುವಕರಿಗೆ ತಿಳಿಸಿ, ಅವರು ಮುಂದಿನ ದಿನದಲ್ಲಿ ಸ್ವ - ಉದ್ಯೋಗ ಮಾಡಲು ಪ್ರೇರಣೆ ಕೊಡಲಿದ್ದಾರೆ. ಪ್ರೊ. ದಿವ್ಯಾರಾಣಿ ಪ್ರದೀಪ್ ರವರು ಮಹಿಳಾ ಸಬಲೀಕರಣ ಮತ್ತು ಮಹಿಳೆ ಯವರು ಯಾವ ಉದ್ಯಮ ಮಾಡುವ ಮೂಲಕ ಬೆಳೆಯಬಹುದು ಎಂದು ಮಾಹಿತಿ ನೀಡಲಿದ್ದಾರೆ. ಮೈತ್ರಿ ಮಲ್ಲಿ, ಮಹಿಳಾ ಯುವ ಉದ್ಯಮಿ, ಮಂಗಳೂರು ಇವರು ತನ್ನ ಉದ್ಯಮವನ್ನು ಹೇಗೆ ಬೆಳೆಸುತ್ತ ಯಶಸ್ವಿ ಉದ್ಯಮಿಯಾಗಲು ಪ್ರಯತ್ನ ಪಡುವ ಬಗ್ಗೆ ಯುವಕರಿಗೆ ಮಾಹಿತಿ ಮಾಡಲಿದ್ದಾರೆ. ನಂತರ ಡಾ. ಸಿ. ಕೆ.ಮಂಜುನಾಥ್, ಡಾ. ಶುಭ, ಮಾಹೇ, ಪ್ರವೀಣ್ ಶೆಟ್ಟಿ, ಎಂ. ಐ. ಟಿ, ಡಾ. ಸುಧೀರಾಜ್, ಹರೀಶ್, ಡಿವಿಷನಲ್ ಮ್ಯಾನೇಜರ್, ಲೀಡ್ ಬ್ಯಾಂಕ್ ಇವರು ಲೀಡರ್ ಶಿಪ್, ಕಮ್ಯುನಿಕೇಷನ್ ಸ್ಕಿಲ್, ಇಂಟರ್ವ್ಯೂ ತಯಾರಿ, ಬ್ಯಾಂಕ್ ಗಳಿಂದ ಉದ್ಯಮ ಮಾಡಲು ಸಿಗುವ ಸಹಾಯ ಮುಂತಾದ ಅನೇಕ ವಿಷಯ ಗಳ ಬಗ್ಗೆ ತರಬೇತಿ ನೀಡಲಿದ್ದಾರೆ. ಭಾಗವಹಿಸಿದ ಅಭ್ಯರ್ಥಿಗಳಿಗೆ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಸರ್ಟಿಫಿಕೇಟ್ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಡುಬಿದ್ರಿ ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಾರ್ಯದರ್ಶಿ ವಿಜಿತ್ ಶೆಟ್ಟಿ, ಬಂಟರ ಸಂಘದ ಸಿರಿಮುಡಿ ದತ್ತಿ ನಿಧಿಯ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಮಹಿಳಾ ಘಟಕಾಧ್ಯಕ್ಷೆ ಜ್ಯೋತಿ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ನವೀನ್‌ ಎನ್‌ ಶೆಟ್ಟಿ, ಸಂತೃಪ್ತಿ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.