ಕಾಪು : ಸಮಾಜ ರತ್ನ ದಿ| ಕೆ. ಲೀಲಾಧರ ಶೆಟ್ಟಿ ಮತ್ತು ದಿ| ವಸುಂದರಾ ಎಲ್. ಶೆಟ್ಟಿ ಇವರ ಫ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಮಾಜ ಸೇವಕ ಕಾಪು ಸೂರಿ ಶೆಟ್ಟಿ, ದಿ | ಲೀಲಾಧರ ಶೆಟ್ಟಿ ಕುಟುಂಬಿಕರು ಹಾಗೂ ಅವರ ಅಭಿಮಾನಿ ಬಳಗ, ಕಾಪು ಪುರಸಭೆಯ ಪೌರ ಕಾರ್ಮಿಕರ ಸಹಕಾರದಲ್ಲಿ ಗುರುವಾರ (ಡಿ.12)ದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಶ್ರೀ ವೀರಭದ್ರ ದೇವಸ್ಥಾನ ಸಭಾಂಗಣ, ಕಾಪು ಇಲ್ಲಿ ಬೃಹತ್ ರಕ್ತದಾನ ಶಿಬಿರ ಜರಗಲಿದೆ.
ಕಾರ್ಯಕ್ರಮವನ್ನು ಸಾಯಿರಾಧಾ ಗ್ರೂಪ್ ಆಡಳಿತ ನಿರ್ದೇಶಕ ಮನೋಹರ್, ಎಸ್, ಶೆಟ್ಟಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕಾಪು ಪುರಸಭೆ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್., ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಚಿಕ್ಕಲಪದನಿ, ಬಾಲಾಜಿ ಯೋಗೀಶ್ ಶೆಟ್ಟಿ
ಕಾಪು, ಶ್ರೀಧರ್ ಸಿ, ಶೆಟ್ಟಿ ಮುಲುಂದು, ಮುಂಬೈ, ಉದ್ಯಮಿ ಪ್ರಭಾಕರ್ ಎಸ್, ಪೂಜಾರಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ವೈದಾಧಿಕಾರಿ ಡಾ| ವೀಣಾ ಕುಮಾರಿ, ಕಾಪು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷರಾದ ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕುಟಚಾದ್ರಿ, ಕರಂದಾಡಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ| ರಾಜಶ್ರೀ ಕಿಣಿ, ವೈದ್ಯಾಧಿಕಾರಿ ಡಾ| ದೃತಿ ವಿ ಆಳ್ವ, ಮಹೇಶ್ ಎಸ್ ಶೆಟ್ಟಿ ಹೊಸರಸು ಹೊಸಮನೆ ಪಣಿಯೂರು, ಉದ್ಯಮಿ ಖಾದರ್ ಶಾಲಿ ಮೂಳೂರು ಭಾಗವಹಿಸಲಿದ್ದಾರೆ.
ಈ ಸಂದರ್ಭ ಕಾಪು ಪುರಸಭೆಯ ಒಟ್ಟು 38 ಜನ ಪೌರಕಾರ್ಮಿಕರಿಗೆ ಹಾಗೂ ಸಮಾಜ ಸೇವಕ ದೆಂದೂರು ಅಶೋಕ್ ಶೆಟ್ಟಿಯವರಿಗೆ ಸನ್ಮಾನವು ನಡೆಯಲಿದೆ.
ಅದೇ ದಿನ ಬೆಳಿಗ್ಗೆ 8 ಗಂಟೆಗೆ ಮಜೂರು ಸರ್ಕಲ್ ಬಳಿಯ ಲೀಲಾಧರ ಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜ ಸೇವಕ ಕಾಪು ಸೂರಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.