ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ : ಸೃಜನ ಕುಲಾಲ್ ಗೆ ಚಿನ್ನ, ಬೆಳ್ಳಿ ಪದಕ

Posted On: 11-12-2024 05:06PM

ಕಾರ್ಕಳ : ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬಾಲಕಿಯರ 16 ವರ್ಷ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಾಂತವಾರ ಗ್ರಾಮದ ಬಾರಾಡಿಯ ಸೃಜನ ಕುಲಾಲ್ ಇವರು ಭಾಗವಹಿಸಿ ಚಿನ್ನದ ಪದಕ ಕುಮಿಟೆಯಲ್ಲಿ(ಫೈಟಿಂಗ್ ನಲ್ಲಿ) ಹಾಗೂ ಬೆಳ್ಳಿಯ ಪದಕವನ್ನು ಕಟ ವಿಭಾಗದಲ್ಲಿ ಪಡೆದಿರುತ್ತಾರೆ.

ಇವರು ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಾರೆ.

ಇವರು ಕಾಂತಾವರ ಗ್ರಾಮದ ಬಾರಾಡಿ ಜಗದೀಶ್ ಕುಲಾಲ್ ಹಾಗೂ ಜ್ಯೋತಿ ಕುಲಾಲ್ ದಂಪತಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕರಾದ ಸತೀಶ್ ಬೆಳ್ಮಣ್ ಹಾಗೂ ಮೃಣಾಲಿ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ. ಕಾಂತಾವರ ಕುಲಾಲ ಸಂಘದ ಅಧ್ಯಕ್ಷರು ವಿಠಲ ಮೂಲ್ಯ ಬೇಲಾಡಿ, ಸಂಘದ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.

Hi