ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ, ಹೆದ್ದಾರಿ ತಡೆ, ಪ್ರತಿಭಟನಾ ಸಭೆ

Posted On: 20-01-2025 05:26PM

ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಸೋಮವಾರ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಜೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಕೆ ಇದೇ ಮುಂತಾದ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಲಾಯಿತು.

ಪ್ರತಿಭಟನಾ ಸಭೆಯಲ್ಲಿ ರಾಜಕೀಯ ಮುಖಂಡರಿಗೆ ಮತ್ತು ಅಧಿಕಾರಿ ವರ್ಗಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ, ಯೋಗೀಶ್ ಶೆಟ್ಟಿ, ಶೇಖರ್ ಹೆಜಮಾಡಿ, ಎಂ.ಎ ಗಫರ್ ಸಹಿತ ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.