ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಲ್ಪೆ ವತಿಯಿಂದ ಆರ್ಥಿಕ ಸಹಕಾರ

Posted On: 28-09-2020 09:48AM

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮಲ್ಪೆ ಇದರ ವತಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಶ್ರೀ ರಾಜೇಶ್ ಪೈ ಇವರಿಗೆ ಗಣೇಶೋತ್ಸವ ಸಮಿತಿಯ ಸದಸ್ಯರ ಸಹಕಾರದಿಂದ ನೀಡಲಾದ ಆರ್ಥಿಕ ಸಹಕಾರದ ಚೆಕ್ಕನ್ನು ಅವರ ಧರ್ಮಪತ್ನಿ ಶ್ರೀಮತಿ ಫ್ಲೋರಾ ಇವರಿಗೆ ಹಸ್ತಾಂತರಿಸಲಾಯಿತು. ಹಾಗೂ ಸಮಿತಿಯ ಮಾಜಿ ಕಾರ್ಯದರ್ಶಿ ಶ್ರೀ ನಾರಾಯಣ ಟಿ. ಕಿಣಿಯವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಶ್ರೀ ಕಾಂತಪ್ಪ ಕರ್ಕೇರ, ಶ್ರೀ ಶ್ಯಾಮ ಅಮೀನ್, ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಮೈಂದನ್, ಉಪಾಧ್ಯಕ್ಷರಾದ ಶ್ರೀ ಮಹೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿ ಶಿವರಾಮ ಕಲ್ಮಾಡಿ, ಕೋಶಾಧಿಕಾರಿ ಶ್ರೀ ಸುರೇಶ್ ಕರ್ಕೇರ ಮತ್ತು ಸದಸ್ಯರಾದ ಶ್ರೀಮತಿ ಪುಷ್ಪಾ ಶಶಿಧರ್ ಉಪಸ್ಥಿತರಿದ್ದರು.