ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ತಂಡ ಜಯ
Posted On:
28-01-2025 07:58PM
ಪಡುಬಿದ್ರಿ : ಎರಡು ದಶಕಗಳ ಕಾಲ ಅವಿರೋಧ ಆಯ್ಕೆಯ ಮೂಲಕ ನಡೆಯುತ್ತಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿಗೆ ಮಂಗಳವಾರ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ಜರಗಿದ ಚುನಾವಣೆಯಲ್ಲಿ ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯ ಗಳಿಸಿದೆ.
ಒಟ್ಟು 13 ಆಡಳಿತ ಮಂಡಳಿಯ ಸದಸ್ಯರಲ್ಲಿ ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳಿದ್ದು, ಇಬ್ಬರು ಮೊದಲೇ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ ಎಂ ಚುನಾವಣಾಧಿಕಾರಿಯಾಗಿದ್ದು, ಆಯ್ಕೆಗೊಂಡ ಸದಸ್ಯರ ಹೆಸರನ್ನು ಘೋಷಿಸಿದರು.
ಒಟ್ಟು 3,200 ಮತಗಳಲ್ಲಿ 1,935
ಮತದಾನವಾಗುವ ಮೂಲಕ ಶೇ.60. ಮತದಾನವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವೈ ಸುಧೀರ್ ಕುಮಾರ್, ಚುನಾವಣೆಗೆ ಮೊದಲು ಹಲವಾರು ಸುಳ್ಳು ಅಪಪ್ರಚಾರಗಳನ್ನು ಮಾಡಿದ್ದರೂ, ಇಂದಿನ ಗೆಲುವು ಸತ್ಯಕ್ಕೆ ಸಂದ ಜಯ. ಮತ ಚಲಾಯಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಮುಂದಿನ 5 ವರ್ಷಗಳ ಅವಧಿಗೆ ಗುರುರಾಜ ಪೂಜಾರಿ, ವೈ ಸುಧೀರ್ ಕುಮಾರ್, ಜಿತೇಂದ್ರ ಫುರ್ಟಾಡೊ, ಮಾಧವ ಆಚಾರ್ಯ, ವಾಸುದೇವ, ರಾಜಾರಾಮ ರಾವ್, ಹಸನ್ ಬಾವ, ರೋಹಿಣಿ ಎ., ಕುಸುಮಾ ಕರ್ಕೇರ, ಗಿರೀಶ್ ಫಲಿಮಾರು, ಶಿವರಾಮ ಎನ್ ಶೆಟ್ಟಿ, ಕೃಷ್ಣ ಬಂಗೇರ, ಕಾಂಚನಾ ಆಯ್ಕೆಯಾಗಿದ್ದಾರೆ.