ಇನ್ನಂಜೆ ಗ್ರಾಮ ಪಂಚಾಯತ್ ಪ್ರತಿ ಬಾರಿಯೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಹಾಗುಹೋಗುಗಳಿಗೆ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿ ಗ್ರಾಮ ಅನಿಸಿಕೊಂಡಿದೆ.
ಇಂದು 151 ನೇ ಗಾಂಧಿ ಜಯಂತಿಯ ಪ್ರಯುಕ್ತ ಇನ್ನಂಜೆ ಬಾಲವನದಲ್ಲಿ ಬೆಳೆದಿದ್ದ ಗಿಡ, ಬಳ್ಳಿ, ಪೊದೆಗಳನ್ನು ಕಡಿಯುವುದರ ಮೂಲಕ ಸ್ವಚ್ಛ ಇನ್ನಂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಾಜೇಶ್ ಶೆಣೈ, ಮಾಜಿ ಉಪಾಧ್ಯಕ್ಷರಾದ ಮಾಲಿನಿ ಶೆಟ್ಟಿ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಶ್ರೀ ಚಂದ್ರಶೇಖರ ಸಾಲಿಯಾನ್. ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಲ್ಯಾಲು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರೀತಿ ಶೆಟ್ಟಿ, ಹರೀಶ್, ಸಂದೀಪ್, ವಜ್ರೇಶ್, ಪವಿತ್ರ, ರೋಕೆಶ್, ಗ್ರಾಮಸ್ಥರು ಆದ ಅರುಣ್ ಶೆಟ್ಟಿ, ಗಣೇಶ್ ಆಚಾರ್ಯ, ಚಿಂತನ್ ಉಪಸ್ಥಿತರಿದ್ದರು
ವರದಿ : ವಿಕ್ಕಿ ಪೂಜಾರಿ ಮಡುಂಬು
NAMMA KAUP NEWS