ಕಾಪು ಶ್ರೀ ಹೊಸ ಮಾರಿಗುಡಿಗೆ ವಾಟಾಳ್ ನಾಗರಾಜ್ ಭೇಟಿ
Posted On:
04-04-2025 10:21AM
ಕಾಪು : ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು ಅಮ್ಮನ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ನನಗೆ ಹಿಂತಿರುಗಲು ಫ್ಲೈಟ್ ಗೆ ಸಮಯ ಆಗುತ್ತಿದೆ ಆದರೂ ಇಲ್ಲೇ ಉಳಿಯೋಣ ಅನಿಸುತ್ತಿದೆ. ಮತ್ತೆ ಮತ್ತೆ ಇಲ್ಲಿಗೆ ಬರಬೇಕೆಂಬ ಹಂಬಲ ನನಗಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ರಾಧಾರಮಣ ಶಾಸ್ತ್ರೀ, ಪ್ರಬಂಧಕ ಗೋವರ್ಧನ್ ಶೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.