ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Posted On: 14-04-2025 09:55PM

ಪಡುಬಿದ್ರಿ : ಪಡುಬಿದ್ರಿಯ ಓಂಕಾರ್ ಕಲಾ ಸಂಗಮದಲ್ಲಿ ನಡೆಯುತ್ತಿರುವ ರಜಾ-ಮಜಾ ಶಿಬಿರದಲ್ಲಿ ವಿಶ್ವರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯನ್ನು ಅಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಮಾಜಿಕ ಚಿಂತಕರಾದ ಶೇಖರ್ ಹೆಜ್ಮಾಡಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ಚಿಂತನೆಗಳು ಮತ್ತು ಭಾರತದ ಸಂವಿಧಾನ ಬಗ್ಗೆ ರಜಾ- ಮಜಾ ಶಿಬಿರದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಲಾ ಸಂಗಮದ ಮುಖ್ಯಸ್ಥರಾದ ಗೀತಾ ಅರುಣ್ ದೀಪ ಪ್ರಜ್ವಲನೆ ಮಾಡಿದರು. ಶಿಬಿರಾರ್ಥಿ ಪುಟಾಣಿ ಜೃೆಷ್ಣವಿರವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉದಯ ಕುಮಾರ್ ಭಟ್, ಅರುಣ್ ಕುಮಾರ್, ಸುಪ್ರೀತಾ ಕೋಟ್ಯಾನ್ ಪಾಂಗಳ, ಶ್ವೇತಾ ಪಾಂಗಳ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿ, ದೀಪಾ ಕರ್ಕೇರ ವಂದಿಸಿದರು.