ಪಲಿಮಾರು : ಪಲಿಮಾರು ಗ್ರಾಮ ಪಂಚಾಯತ್, ಶ್ರೀ ಮಹದೇಶ್ವರ ಭಜನ ಮಂಡಳಿ ಮತ್ತು ಮುಂಡಾಲ ಯುವ ವೇದಿಕೆ (ರಿ.) ಪಡುಬಿದ್ರಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಜನ್ಮದಿನಾಚರಣೆಯನ್ನು ಪಲಿಮಾರು ಗ್ರಾಮ ಪಂಚಾಯತ್ ನ ಬ್ರಹ್ಮಶ್ರೀ ನಾರಾಯಣ ಸಭಾಂಗಣದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಶೇ.100 ಶೈಕ್ಷಣಿಕ ಸಾಧನೆ ಮಾಡಿದ ಪಲಿಮಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಹಿತ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಪಲಿಮಾರು ಪಂಚಾಯತ್ ಅಧ್ಯಕ್ಷರಾದ
ಸೌಮ್ಯಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಉಪಾಧ್ಯಕ್ಷರಾದ ರಾಯೇಶ್ವರ ಪೈ , ಪಿಡಿಓ ಶಶಿಧರ್, ಮಹದೇಶ್ವರ ಮಂಡಳಿ ಸುಧಾಕರ್,ವಮುಂಡಾಲ ಯುವ ವೇದಿಕೆಯ ಅಧ್ಯಕ್ಷ ಮಂಜುನಾಥ್ ಕರ್ಕೇರ್, ಗ್ರಾ.ಪಂ ಸದಸ್ಯರು, ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.