ಕಾಪು : ಇತ್ತೀಚೆಗೆ ಸರಕಾರದ ವತಿಯಿಂದ ನಡೆಸಲಾದ ಸಿ.ಇ.ಟಿ. ಪರೀಕ್ಷೆಯ ವೇಳೆ ರಾಜ್ಯದ ವಿವಿಧ ಸ್ಥಳಗಳಲ್ಲಿ ವಿದ್ಯಾರ್ಥಿಗಳ ಜನಿವಾರ ಕಳಚಿದ ಹಾಗೂ ಕತ್ತರಿಸಿದ ಘಟನೆ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮಾಡಿದ ಅಪಮಾನವಲ್ಲ, ಸಮಸ್ತ ಜನಿವಾರಧಾರಣೆ ಮಾಡುವ ಹಿಂದೂ ಸಮುದಾಯಗಳಿಗೆ ಮಾಡಿರುವ ಅವಮಾನವಾಗಿರುತ್ತದೆ. ಈ ಘಟನೆಯನ್ನು ಅವಿಭಜಿತ ದ. ಕ. ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಮಧು ಆಚಾರ್ಯ, ಮೂಲ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕಾನೂನಿನಡಿಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.