ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನಿವಾರ ಪ್ರಕರಣ : ವಿಶ್ವಕರ್ಮ ಒಕ್ಕೂಟದಿಂದ ಖಂಡನೆ

Posted On: 21-04-2025 03:31PM

ಕಾಪು : ಇತ್ತೀಚೆಗೆ ಸರಕಾರದ ವತಿಯಿಂದ ನಡೆಸಲಾದ ಸಿ.ಇ.ಟಿ. ಪರೀಕ್ಷೆಯ ವೇಳೆ ರಾಜ್ಯದ ವಿವಿಧ ಸ್ಥಳಗಳಲ್ಲಿ ವಿದ್ಯಾರ್ಥಿಗಳ ಜನಿವಾರ ಕಳಚಿದ ಹಾಗೂ ಕತ್ತರಿಸಿದ ಘಟನೆ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮಾಡಿದ ಅಪಮಾನವಲ್ಲ, ಸಮಸ್ತ ಜನಿವಾರಧಾರಣೆ ಮಾಡುವ ಹಿಂದೂ ಸಮುದಾಯಗಳಿಗೆ ಮಾಡಿರುವ ಅವಮಾನವಾಗಿರುತ್ತದೆ. ಈ ಘಟನೆಯನ್ನು ಅವಿಭಜಿತ ದ. ಕ. ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಮಧು ಆಚಾರ್ಯ, ಮೂಲ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕಾನೂನಿನಡಿಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.