ಪತ್ರಕರ್ತ ಕಿರಣ್ ಪೂಜಾರಿ ಮುದ್ದುಗುಡ್ಡೆಯವರಿಂದ ಅರೆಬೆತ್ತಲೆ ಪ್ರತಿಭಟನೆ
Posted On:
22-04-2025 04:56PM
ಕುಂದಾಪುರ : ಅನವಶ್ಯಕ ಕೇಸು ದಾಖಲಿಸಿ ಕಿರುಕುಳ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಬಿಲ್ಲವ ಹೋರಾಟಗಾರ, ಪತ್ರಕರ್ತ ಕಿರಣ್ ಪೂಜಾರಿ ಮುದ್ದುಗುಡ್ಡೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವವರ ಪರ ನಿಂತು ದಲಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ ನ್ಯಾಯಕ್ಕಾಗಿ ಹೋರಾಟ ನಡೆಸಿದ ತನ್ನ ಮೇಲೆ ಪೊಲೀಸರು, ವಕೀಲರು, ಗ್ರಾಪಂ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆ ಸ್ಥಳಕ್ಕೆ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ತಹಸೀಲ್ದಾರ್ ಪ್ರದೀಪ ಕುರುಡೇಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.