ಶಿರ್ವ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಶಿರ್ವ ಮಾರಿಗುಡಿ ಶ್ರೀ ಮಹಮ್ಮಾಯೀ ಅಮ್ಮನವರ ಸಾನ್ನಿಧ್ಯದಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಬುಧವಾರ ಬೆಳಿಗ್ಗೆ ಆಗಮ ಪಂಡಿತ ಕುತ್ಯಾರು ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ಹಾಗೂ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವೆಂಕಟರಮಣ ಭಟ್ ಪೌರಾಹಿತ್ಯದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಡಿಬೆಟ್ಟು ರತ್ನವರ್ಮ ಹೆಗ್ಡೆ, ಸೋರ್ಕಲ ಸಚ್ಚಿದಾನಂದ ಹೆಗ್ಡೆ, ರಾಜೇಶ್ ಶೆಟ್ಟಿ, ರವೀಂದ್ರ ಶೆಟ್ಟಿ, ಆನಂದ ಶೆಟ್ಟಿ, ರತ್ನಾಕರ ಆಚಾರ್ಯ, ಹರೀಶ್ ಪೂಜಾರಿ, ವಿಷ್ಣುಮೂರ್ತಿ ಭಜನಾ ಮಂಡಳಿ ಸದಸ್ಯರು, ಜೀರ್ಣೋದ್ಧಾರದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.