ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ : ರಚನ್ ಸಾಲಿಯಾನ್
Posted On:
12-05-2025 07:27PM
ಕಾರ್ಕಳ : ನಿಟ್ಟೆ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಸ್ಥಾಪಕಾಧ್ಯಕ್ಷ ಶಿವಕುಮಾರ್ ಕರ್ಜೆ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.
ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿ ಕೂಂಡಿರುವ ನಿಟ್ಟೆ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್ ಗೋಡೆಯ ಮೇಲೆ ಮೇ.7ರಂದು ರಾತ್ರಿ ಕೆಲವು ವಿದ್ಯಾರ್ಥಿನಿಯರು ದೇಶ ದ್ರೋಹ ಬರವಣಿಗೆಯ ಘಟನೆಯಲ್ಲಿ ಕಂಡು ಬಂದಿದ್ದು, ದೇಶದ ಆಂತರಿಕ ಭದ್ರತೆಗೆ ಅನುಮಾನ ಸೃಷ್ಟಿಸುವ ಕೃತ್ಯವಾಗಿದ್ದು, ಇದನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ತ್ರೀವವಾಗಿ ಖಂಡಿಸುತ್ತದೆ.
ಪ್ರಸುತ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ದೇಶಾಭಿಮಾನವನ್ನು ಹೆಚ್ಚಿಸುತ್ತಿದ್ದು, ನಮ್ಮ ದೇಶದ ಸೈನ್ಯದ ತ್ಯಾಗ ಮತ್ತು ಸೇವೆಯನ್ನು ಇಡೀ ದೇಶವೇ ಕೊಂಡಾಡುತಿರುವುದು ಗಮನಾರ್ಹ ಸಂಗತಿ. ಇಂತಹ ಸಂದರ್ಭದಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಚಟುವಟಿಕೆ ಕಂಡು ಬಂದಿರುವುದು ಅವಮಾನೀಯ. ಈ ರೀತಿಯ ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕ್ಯೆಗೊಂಡು, ವಿದ್ಯಾರ್ಥಿಗಳನ್ನು ಕಾಲೇಜ್ ನಿಂದ ಅಮಾನತುಗೊಳಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಉಡುಪಿ ಜಿಲ್ಲಾಧ್ಯಕ್ಷ ಸ್ವಯಂ ಶೆಟ್ಟಿ, ಪದಾಧಿಕಾರಿಗಳಾದ ಸ್ಮರಣ್ ನಿಟ್ಟೆ, ಅಭಿಲಾಷ್ ನಿಟ್ಟೆ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರತೀಕ್ ಶೆಟ್ಟಿ, ಸನ್ನಿ ನೆಲ್ಸನ್ ಡಿಸೋಜ ಉಪಸ್ಥಿತರಿದ್ದರು.