ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ, ಪಡುಬಿದ್ರಿ ಇದರ 15ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ, ಕರಾವಳಿ ಸ್ಟಾರ್ಸ್ ನಡಿಪಟ್ಟ ಇವರಿಂದ ನೃತ್ಯ ವೈವಿಧ್ಯ, ಅರುಣ್ ಕಾಪು ಇವರಿಂದ ಸಂಗೀತ ಸಂಜೆ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ತುಳು ಚಾರಿತ್ರಿಕ ನಾಟಕ ಛತ್ರಪತಿ ಶಿವಾಜಿ ಮೇ.16, ಶುಕ್ರವಾರ ಸಂಜೆ 5ಗಂಟೆಯಿಂದ ಸಾಗರ್ ವಿದ್ಯಾ ಮಂದಿರ ಶಾಲಾ ವಠಾರದಲ್ಲಿ ಜರಗಲಿದೆ ಎಂದು ಕರಾವಳಿ ಸ್ಟಾರ್ಸ್ ನಡಿಪಟ್ನ, ಪಡುಬಿದ್ರಿ ಇದರ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.