ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮಜೂರು ಮದರಸದಲ್ಲಿ ಮಾದಕ ದ್ರವ್ಯದ ವಿರುದ್ದ ಅಭಿಯಾನ

Posted On: 07-06-2025 01:31PM

ಕಾಪು : ಸಮಾಜದಲ್ಲಿ ಅಮಲು ಪದಾರ್ಥದ ಉಪಯೋಗವು ಜಾಸ್ತಿಯಾಗುತಿದ್ದು ಮಾದಕ ದ್ರವ್ಯ ವಿರುದ್ಧದ ಅಭಿಯಾನಗಳು ಸಮಾಜದ ಕಣ್ಣು ತೆರೆಸಲು ಕಾರಣವಾಗಿರುತ್ತದೆ ಎಂದು ಮಸ್ಜಿದ್ ಅಧ್ಯಕ್ಷರಾದ ಡಾ. ಫಾರೂಕ್ ಚಂದ್ರನಗರ ತಿಳಿಸಿದರು. ಅವರು ಸಿರಾಜುಲ್ ಹುದಾ ಮದರಸ ಮಜೂರು -ಮಲ್ಲಾರು ಇದರ ವಿದ್ಯಾರ್ಥಿಗಳು ಸುನ್ನಿ ಬಾಲ ಸಂಘ ಇದರ ಅಧೀನದಲ್ಲಿ ನಡೆಸಿದ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಮಜೂರ- ಮಲ್ಲಾರು ದಫ್ ಸಮಿತಿ ಯಂಗ್ಮೆನ್ಸ್ ಸಮಿತಿ, ಸ್ವಲಾತ್ ಸಮಿತಿ ಉತ್ತಮ ಕೆಲಸ ಮಾಡಿ ಜನ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಮಾತ್ ಕತಿಬರಾದ ಅಬ್ದುರಶೀದ್ ಸಖಾಫಿ ಹಾಗೂ ಉಸ್ತಾದುರುಗಳು ಜಮಅತ್ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.