ಕಾಪು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ.) ಇದರ ಅಧ್ಯಕ್ಷರಾದ ಸಂದೀಪ್ ಕುಮಾರ್ ಮಂಜ ಇವರನ್ನು ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.) ರಾಜ್ಯ ಉಪಾಧ್ಯಕ್ಷರನ್ನಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಇವರು ಆಯ್ಕೆ ಮಾಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.