ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜೂ.13 -14 : ಮಥುರಾದಲ್ಲಿ ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

Posted On: 11-06-2025 11:07AM

ಕಾಪು : ಉತ್ತರ ಪ್ರದೇಶ ಮಥುರಾದ ಶ್ರೀಧಾಮ ವೃಂದಾವನದಲ್ಲಿ ಜೂನ್ 13 ಮತ್ತು 14 ರಂದು ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಟಪಾಡಿಯ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ಮತ್ತು ಕಾಶಿ ಮುಕ್ತಿ ಹಾಗೂ ಯಾತ್ರಾ ಸ್ಥಳಗಳು ಮತ್ತು ಭವಿಷ್ಯದ ಏಳಿಗೆಗಳಿಗೆ ಭೌತಿಕ ಮತ್ತು ಆಧ್ಯಾತ್ಮಿಕ ಅಭಿವೃದ್ಧಿ, ಪಂಗಡದ ಅನಾನುಭವಿ ಸನ್ಯಾಸಿಗಳ ತರಬೇತಿಗಳ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.