ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುಂದಾಪುರ : ವಿದ್ಯಾಪೋಷಕ್ 76ನೇ ಮನೆ ಹಸ್ತಾಂತರ

Posted On: 16-06-2025 11:07AM

ಉಡುಪಿ : ಇಂಡಿ ವಿಲೇಜ್ ನ ಸಂಸ್ಥಾಪಕರಾದ ಶ್ರೀಕಾಂತ್ ಕೆ. ಅರಿಮಣಿತ್ತಾಯ ಮತ್ತು ಭಾರತಿ ಶ್ರಿಕಾಂತ್ ದಂಪತಿಗಳು ತಮ್ಮ ಮೂವತ್ತನೇ ವರ್ಷದ ವಿವಾಹ ಮಹೋತ್ಸವದ ಸವಿನೆನಪಿಗಾಗಿ 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದಾಪುರ ತಾಲೂಕಿನ ಮೂಡುಮುಂದದ ಮೋರ್ಟುವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸುಶ್ಮಿತಾ ಇವಳಿಗೆ ನೂತನವಾಗಿ ನಿರ್ಮಿಸಿಕೊಟ್ಟ ‘ವಜ್ರಮ್’ ಮನೆಯನ್ನು ಹಸ್ತಾಂತರಿಸಿದರು.

ಶ್ರೀಕಾಂತ್ ಕೆ. ಅರಿಮಣಿತ್ತಾಯ ಮತ್ತು ಭಾರತಿ ಶ್ರಿಕಾಂತ್ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶ್ರೀಕಾಂತರವರು, ತನ್ನ ಅಜ್ಜ, ತಂದೆ,ತಾಯಿ, ಗುರುಗಳು ತನಗೆ ಪ್ರೇರಕರಾಗಿದ್ದು, ಮುಂದಿನ ದಿನಗಳಲ್ಲಿ ಕಲಾರಂಗದ ಎಲ್ಲ ಚಟುವಟಿಕೆಗಳಿಗೆ ನೆರವಾಗಲು ಸಿದ್ದನಾಗಿದ್ದೇನೆ. ಸಮಾಜದ ದುರ್ಬಲ ವರ್ಗದ ಮಕ್ಕಳಿಗೆ ಉದ್ಯೋಗ ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿ, ಭವಿಷ್ಯದ ತನ್ನ ಯೋಜನೆಗಳನ್ನು ಪ್ರಕಟಿಸಿದರು. ಅಭ್ಯಾಗತರಾಗಿ ಆಗಮಿಸಿದ ಹಿರಿಯ ಬರಹಗಾರರು, ಶಿಕ್ಷಣತಜ್ಞರು ಆದ ಡಾ.ಬಿ.ಭಾಸ್ಕರ್ ರಾವ್, ಜಾಗತಿಕ ಮಟ್ಟದ ವಾಣಿಜ್ಯೋದ್ಯಮಿ ಶ್ರೀಕಾಂತರನ್ನು ತುಂಬು ಹೃದಯದಿಂದ ಅಭಿನಂದಿಸಿ, ಅವರ ಅಗಾಧ ಸಾಮರ್ಥ್ಯವನ್ನು ಪ್ರಶಂಸಿದರು. ಭೀಮ ಗೋಲ್ಡ್ಸ್ ಪ್ರೈ.ಲಿ.ಬೆಂಗಳೂರು ಇದರ ಪ್ರಮುಖರಾದ ಶ್ರೀಪತಿ ಭಟ್ ಅಭಿನಂದನೆಯ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಅರಿಮಣಿತ್ತಾಯರ ಮಾತೃಶ್ರೀ ಪುಷ್ಕಳಾ ಕೃಷ್ಣನ್, ಪುತ್ರ ವಿಶಾಲ್ ಅರಿಮಣಿತ್ತಾಯ, ಅಳಿಯ ನಚಿಕೇತ, ನಾಗರಾಜ ಆಚಾರ್ಯ, ಬಾಲಕೃಷ್ಣ ಕೋರ್ನಾಯ, ಸುಬ್ರಮಣ್ಯ ಭಟ್, ಹಯವದನ ಭಟ್, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್.ವಿ.ಭಟ್, ವಿ. ಜಿ. ಶೆಟ್ಟಿ, ಸದಸ್ಯರುಗಳಾದ ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ವಿಜಯ ಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಅನಂತರಾಜ ಉಪಾಧ್ಯ, ಅಶೋಕ ಎಂ., ನಟರಾಜ ಉಪಾಧ್ಯ, ಗಣರಾಜ ಭಟ್, ವಿದ್ಯಾಪ್ರಸಾದ್, ಮಂಜುನಾಥ ಹೆಬ್ಬಾರ್, ಕಿಶೋರ್ ಸಿ. ಉದ್ಯಾವರ, ಗಣೇಶ ಬ್ರಹ್ಮಾವರ, ಗಣಪತಿ ಭಟ್ ಭಾಗವಹಿಸಿದ್ದರು. ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ರಾಘವೇಂದ್ರ ಸೋಮಯಾಜಿ ಸಂಸ್ಥೆಗೆ ಹಾಗೂ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಎಚ್.ಎನ್.ವೆಂಕಟೇಶ್ ವಂದಿಸಿದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.