ಜೂ. 17 (ನಾಳೆ) : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀಮಾತಾ ಸು-ವರ್ಣ ಪುಷ್ಪಾಂಜಲಿ ಸೇವೆ
Posted On:
16-06-2025 11:20AM
ಕಾಪು : ಇಲ್ಲಿನ ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ಶ್ರೀಮಾತಾ ಸಭಾಭವನ ಉದ್ಘಾಟನೆ ಮತ್ತು ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಮತ್ತು ತಂಡದವರು ರಚಿಸಿರುವ ಮಹಾಮಾತೆ ಮಾರಿಯಮ್ಮ ಗ್ರಂಥ ಬಿಡುಗಡೆ ಹಾಗೂ ಘಂಟಾನಾದ ಸೇವೆಗೆ ಚಾಲನೆಯು ಜೂನ್ 17, ಮಂಗಳವಾರ ನಡೆಯಲಿದೆ.
ಕ್ಷೇತ್ರದ ಪ್ರಧಾನ ತಂತ್ರಿ ಕೊರಂಗ್ರಪಾಡಿ ಕೆ.ಪಿ.ಕುಮಾರಗುರು ಅವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕ ಕಲ್ಯ ಶ್ರೀನಿವಾಸ ತಂತ್ರಿಗಳ ಸಹಯೋಗದೊಂದಿಗೆ ಶ್ರೀಮಾತಾ ಸು-ವರ್ಣ ಪುಷ್ಪಾಂಜಲಿ ಸೇವೆ ಆಯೋಜಿಸಲಾಗಿದೆ.
ಬೆಳಗ್ಗೆ 9ಕ್ಕೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥನೆ, 9.9ಕ್ಕೆ ಶ್ರೀಮಾತಾ ಸಭಾಭವನ ಉದ್ಘಾಟನೆ, 9.18ರಿಂದ ಶ್ರೀಮಾತಾ ಸು-ವರ್ಣ ಪುಷ್ಪಾಂಜಲಿ ಸೇವೆಯ ಪೂಜಾ ಪ್ರಕ್ರಿಯೆ ಆರಂಭ ಮತ್ತು ಭಕ್ತರಿಂದ ಸಂಕಲ್ಪ ಸ್ವೀಕಾರ, 10ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, 11.30 ಕ್ಕೆ ಉತ್ತರ ಪೂಜೆ, ಮಧ್ಯಾಹ್ನ 12ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನೆರವೇರಲಿದೆ.
ಘಂಟಾನಾದ ಸೇವೆ ಚಾಲನೆ ಪ್ರಯುಕ್ತ ಸಂಜೆ 6ರಿಂದ ಘಂಟಾನಾದ ಸೇವೆ ಜರುಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.