ಕಾಪು : ಇಲ್ಲಿನ ರೋಟರಿ ಕ್ಲಬ್ ಇದರ ರಜತೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಳೆದ 37 ವರ್ಷಗಳಿಂದ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಅಧ್ಯಾಪಕರಾಗಿ, ಉಪಪ್ರಾಂಶುಪಾಲರಾಗಿ, ಪ್ರಸ್ತುತ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ನೀಲಾನಂದ ನಾಯ್ಕ್ರವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅಭಿನಂದಿಸಲಾಯಿತು.
ಕಾಪುವಿನ K1 ಹೋಟೆಲ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ರೋಟರಿ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ, ಕಾರ್ಯದರ್ಶಿ ರಾಜೇಂದ್ರನಾಥ್, ರೋಟರಿ ಜಿಲ್ಲಾ ಗವರ್ನರ್ ರೊ. ಸಿಎ ದೇವಾನಂದ್, ಸಹಾಯಕ ಗವರ್ನರ್ ರೊ. ಅನಿಲ್ ಡೇಸಾ, ವಲಯ ಸಹಾಯಕ ರೊ. ಜಾನ್ ಸಿಕ್ಟೇರಾ ಹಾಗೂ ಕಾಪು ರೋಟರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪು ಪರಿಸರದ 25 ಮಂದಿ ಸಾಧಕರನ್ನು ಅಭಿನಂದಿಸಲಾಯಿತು.