ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅವರಾಲು ಮಟ್ಟುವಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ

Posted On: 07-09-2025 09:06PM

ಪಡುಬಿದ್ರಿ : ಶ್ರೀ ನಾರಾಯಣಗುರು ಸೇವಾ ಸಮಿತಿ ಅವರಾಲು ಮಟ್ಟು ನೇತೃತ್ವದಲ್ಲಿ ಅವರಾಲು ಮಟ್ಟು ನಾರಾಯಣ ಪೂಜಾರಿ ಇವರ ಮನೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯನ್ನು ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಈ ಸಂದರ್ಭ ಅವರಾಲು ಮಟ್ಟುವಿನ ಬಿಲ್ಲವ ಸಮಾಜಕ್ಕಾಗಿ ಶ್ರಮಿಸಿದ ಕುಂದಾಪುರ ಮೆಜಿಸ್ಟ್ರೇಟ್ ಕೋಟ್೯ನಲ್ಲಿ ಶಿರಸ್ತೇದಾರ್ ಆಗಿದ್ದ ನಿವೃತ್ತ ಜೀವನ ನಡೆಸುತ್ತಿರುವ ಮದುಸೂದನ್ ಕೋಟ್ಯಾನ್ ರನ್ನು ಶ್ರೀ ನಾರಾಯಣಗುರು ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಸಮಾಜ ಬಾಂಧವರು ಉಪಸ್ಥಿತರಿದ್ದರು.